ಕೊಪ್ಪ: ನಗರದ ಕೆ.ಪಿ.ಎಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ರಾಜೇಶ್ವರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸಾಧನೆಗೈದಿದ್ದಾಳೆ.
ಕಲಾ ವಿಭಾಗದ ವಿದ್ಯಾರ್ಥಿಯಾದ ರಾಜೇಶ್ವರಿ ತಾಲೂಕಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾಳೆ. ಇವರು ಮೇಲ್ಪಾಲ್ ಸಮೀಪದ ಕೃಷಿಕರಾದ ವೆಂಕಟೇಶ್ ಮೂರ್ತಿ ಮತ್ತು ಗೀತಾ ದಂಪತಿಗಳ ಪುತ್ರಿಯಾಗಿದ್ದು, ಈ ಸಾಧನೆಗೆ ಪೋಷಕರು ಸಂತೋಷ ವ್ಯಕ್ತಪಡಿಸಿದ್ದಾರೆ.
ಇವರು ಕನ್ನಡದಲ್ಲಿ 99, ಆಂಗ್ಲ ಭಾಷೆಯಲ್ಲಿ 93, ಇತಿಹಾಸದಲ್ಲಿ 99, ಅರ್ಥಶಾಸ್ತ್ರದಲ್ಲಿ 99, ಸಮಾಜಶಾಸ್ತ್ರದಲ್ಲಿ 98, ರಾಜಕೀಯ ಶಾಸ್ತ್ರದಲ್ಲಿ 96 ಅಂಕಗಳನ್ನು ಪಡೆದುಕೊಂಡಿದ್ದಾರೆ.
ಜಾಹೀರಾತು/Advertisment
0 Comments