ಮೂಡಿಗೆರೆ : ಮಾಜಿ ಪ್ರಧಾನಿ ದೇವೇಗೌಡ ರಾಮನವಮಿಯ ಪ್ರಯುಕ್ತ ಬಿದರಹಳ್ಳಿ ರಾಮೇಶ್ವರ ದೇವರ ದರ್ಶನ ಪಡೆದರು.
ಚುನಾವಣಾ ಪ್ರಚಾರ ಸಭೆಗೂ ಮುನ್ನ ಮೂಡಿಗೆರೆ ತಾಲೂಕಿನ ಬಿದರಹಳ್ಳಿ ಗ್ರಾಮದಲ್ಲಿರುವ ರಾಮೇಶ್ವರ ದೇಗುಲಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದರು.
ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿ ಪರ ಪ್ರಚಾರದಲ್ಲಿ ಜೆಡಿಎಸ್-ಬಿಜೆಪಿ ಕಾರ್ಯಕರ್ತರಿಗೆ ಮಾಜಿ ಪ್ರಧಾನಿ ಸಾಥ್ ನೀಡಿದ್ದು, ಕೋಟಾ ಶ್ರೀನಿವಾಸ್ ಪೂಜಾರಿ ಬೆಂಬಲಿಸುವಂತೆ ಮನವಿ ಮಾಡಿದ್ದಾರೆ.
ದೇವರ ದರ್ಶನದ ಬಳಿಕ ಬಿಜೆಪಿ-ಜೆಡಿಎಸ್ ಮುಖಂಡರೊಂದಿಗೆ ಮೂಡಿಗೆರೆ ಪಟ್ಟಣದ ಅಡ್ಯಂತಾಯ ಬಯಲು ಮಂದಿರದಲ್ಲಿ ಪ್ರಚಾರ ಸಭೆ ನಡೆಸಿದ್ದಾರೆ.
ಜಾಹೀರಾತು/Advertisment
0 Comments