ಮೂಡಿಗೆರೆ: ಇತ್ತೀಚೆಗಷ್ಟೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ಮಾಜಿ ಶಾಸಕ ಎಂ.ಪಿ ಕುಮಾರಸ್ವಾಮಿ ಕಾಂಗ್ರೆಸ್ ಅಭ್ಯರ್ಥಿ ಜೆ.ಪಿ ಹೆಗ್ಡೆಯವರ ಪರವಾಗಿ ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ.
ಲೋಕಸಭಾ ಚುನಾವಣೆಯ ಯಾವುದೇ ಕಾರ್ಯಗಳಲ್ಲೂ ಎಂ.ಪಿ ಕುಮಾರಸ್ವಾಮಿ ಸಕ್ರಿಯವಾಗಿಲ್ಲ ಎಂದು ಬಿಜೆಪಿ ಆರೋಪಿಸಿತ್ತು. ಇದಕ್ಕೆ ಸೆಡ್ಡು ಹೊಡೆಯುವಂತೆ ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಮೂಲೆ ಮೂಲೆಗೂ ತೆರಳಿ ಪ್ರಚಾರ ಕಾರ್ಯದಲ್ಲಿ ಭಾಗಿಯಾಗುತ್ತಿದ್ದಾರೆ.
ದಲಿತ ಸಂಘಟನೆಗಳ ಮುಖಂಡರ ಜೊತೆ ಮಾತನಾಡಿ ಜೆ.ಪಿ ಹೆಗ್ಡೆಯವರಿಗೆ ಮತ ನೀಡುವಂತೆ ಮನವಿ ಮಾಡುತ್ತಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜೆ.ಪಿ ಹೆಗ್ಡೆಯವರಿಗೆ ಲೀಡ್ ಕೊಡಿಸುವುದಾಗಿ ವಿಶ್ವಾಸದ ಮಾತುಗಳನ್ನು ಆಡುತ್ತಿದ್ದಾರೆ.
ಜಾಹೀರಾತು/Advertisment
0 Comments