ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಇನ್ನೊಂದು ಜೀವ ಬಲಿಯಾಗಿದೆ. ತಾಲೂಕಿನ ಆಲ್ದೂರು ದರ್ಗದ ಬಳಿಯ ಕೆಸುವಿನಕಲ್ ಕಾಫಿ ಎಸ್ಟೇಟಿನಲ್ಲಿ ಕೆಲ್ಸ ಮಾಡುತ್ತಿದ್ದ ಕೂಲಿ ಕಾರ್ಮಿಕನನ್ನು ಕಾಡಾನೆ ತುಳಿದು ಸಾಯಿಸಿದೆ.
ಆನಂದ ಪೂಜಾರಿ(55) ಎಂಬ ಕೂಲಿ ಕಾರ್ಮಿಕ ನೂರ್ ಅಹಮ್ಮದ್ ಎಂಬುವವರಿಗೆ ಸೇರಿದ ಕಾಫಿ ಎಸ್ಟೇಟಿನಲ್ಲಿ ಕೆಲಸ ಮಾಡುತ್ತಿದ್ದರು. ಮುಂಜಾನೆ ತೋಟದ ಕೆಲಸಕ್ಕೆಂದು ತೆರಳುತ್ತಿದ್ದ ವೇಳೆ ಕಾಡಾನೆ ಏಕಾಏಕಿ ದಾಳಿ ಮಾಡಿ, ಅನಂದ ಪೂಜಾರಿಯನ್ನು ತುಳಿದು ಸಾಯಿಸಿದೆ.
ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಇದರಿಂದ ಸ್ಥಳೀಯರು ಭಯಭೀತರಾಗಿದ್ದಾರೆ.
ಜಾಹೀರಾತು/Advertisment
0 Comments